ವರಂಗ : ವಿಶ್ವ ಪರಿಸರ ದಿನಾಚರಣೆ

0
22

ಹೆಬ್ರಿ : ಅಮೂಲ್ಯ ಸಹಾಯಹಸ್ತ ಟ್ರಸ್ಟ್ ಚಟ್ಕಲ್ ಪಾದೆ ಮುನಿಯಾಲು ಹಾಗೂ ಹೆಬ್ರಿ ಅಲಯನ್ಸ್ ಕ್ಲಬ್ ಗಳ ಸಂಯುಕ್ತ ಆಶ್ರಯದಲ್ಲಿ ವರಂಗ ಶ್ರೀ ಪದ್ಮಾಂಬ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕ ರತ್ನಾಕರ ಅರಿಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಇದರ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಶ್ಮಾ ನಾಯಕ್, ಅಲಯನ್ಸ್ ಕ್ಲಬ್ ಹೆಬ್ರಿ ಇದರ ಅಧ್ಯಕ್ಷ ಬಾಲಚಂದ್ರ ಎಂ., ಕೋಶಾಧಿಕಾರಿ ಸುರೇಶ್ ಪೂಜಾರಿ, ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ ಉಪಾಧ್ಯಕ್ಷೆ ಇಂದಿರಾ ಬಾಯರಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ಕಬ್ಬಿನಾಲೆ ರಾಮಚಂದ್ರ ಭಟ್, ಅಮೂಲ್ಯ ಸಹಾಯಹಸ್ತ ಟ್ರಸ್ಟ್ ಇದರ ಸಂಯೋಜಕಿ ಶಕುಂತಲಾ ಪೂಜಾರಿ, ಸಹ ಸಂಯೋಜಕಿ ವಿದ್ಯಾ ನಾಯಕ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣಾ ಆರ್ ಭಟ್, ಟ್ರಸ್ಟಿನ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ಸುರೇಶ್ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಜಾತ ವಂದಿಸಿದರು.

LEAVE A REPLY

Please enter your comment!
Please enter your name here