ದಾವಣಗೆರೆ :ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ನೂಲು ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಸುಸಂಪನ್ನ ಗೊಂಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಶ್ರೀ ಗಾಯಿತ್ರಿ ಪರಿವಾರದ ಗೌರವ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ಮತ್ತು ಕುಟುಂಬ ಈ ತಿಂಗಳ ಪೂಜೆಯಲ್ಲಿ ವಸಂತಿ ಮಂಜುನಾಥ್ ದಂಪತಿಯರು, ಪ್ರೇಮಾ ಮಹೇಶ್ವರ ದಂಪತಿಯರು, ಪರಿವಾರದ ಸಂಚಾಲಕ ರಾದ ಸತೀಶ್ ಆರ್.ಎಂ., ವಿಕ್ರಂಜೈನ್, ಡಿ.ಹೆಚ್.ಚನ್ನಬಸಪ್ಪ, ಖಜಾಂಚಿ ಪುರುಷೋತ್ತಮ ಪಟೇಲ್, ಬಿ.ಸತ್ಯನಾರಾಯಣ ಮೂರ್ತಿ, ಮುಂತಾದವರು ಉಪಸ್ಥಿತರಿದ್ದರು.