ದಾವಣಗೆರೆ: ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ ೨೫ ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ದವನದ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಸುಸಂಪನ್ನಗೊAಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ಶೆಣೈ ತಿಳಿಸಿದ್ದಾರೆ.
ಶ್ರೀ ಹನುಮ ಜಯಂತಿಯೊAದಿಗೆ ಶ್ರೀ ಆಂಜನೇಯ ಸ್ವಾಮಿ ಅಷ್ಟೋತ್ತರ ಧ್ಯಾನ ಮಾಡಿದ ಈ ಸಮರಂಭದಲ್ಲಿ ಶ್ರೀ ಗಾಯತ್ರಿ ಪರಿವಾರದ ಹಿರಿಯ ಚೇತನ ಪ್ರೇಮ್ ಜಿ ಪಟೇಲ್ ಮತ್ತು ಕುಟುಂಬದ ಈ ತಿಂಗಳ ಪೂಜಾಯೊಂದಿಗೆ ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಟೇಲ್, ದಾಮೋದರ ಪಟೇಲ್, ಪರಿವಾರದ ಗೌರವ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಸಂಚಾಲಕ ರಾದ ವಿಕ್ರಂಜೈನ್, ಸತೀಶ್ ಆರ್.ಎಂ., ಮುಂತಾದವರು ಉಪಸ್ಥಿತರಿದ್ದರು.