Monday, May 12, 2025
Homeಅಪರಾಧಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆ; ಜೈಲಿನೆದುರೇ ಹಾರ ಹಾಕಿ, ಸಿಹಿ ತಿನ್ನಿಸಿ...

ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆ; ಜೈಲಿನೆದುರೇ ಹಾರ ಹಾಕಿ, ಸಿಹಿ ತಿನ್ನಿಸಿ ಸ್ವಾಗತ; ಮೆರವಣಿಗೆಗೆ ಸಿದ್ಧತೆ

ಬೆಳಗಾವಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಬಿಡುಗಡೆಗೊಂಡ ಬಳಿಕ ಬಿಡುಗಡೆಗೊಂಡ ಅವರನ್ನು ಅವರ ಬೆಂಬಲಿಗರು ಸನ್ಮಾನಿಸಿ, ಮೆರವಣಿಗೆಗೆ ವ್ಯವಸ್ಥೆ ಮಾಡಿದ್ದ ಆಘಾತಕಾರಿ ಘಟನೆ ನಡೆದಿದೆ.

ಬೆಳಗಾವಿಯ ವಂಟೂರಿನಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಲಾಗಿತ್ತು. ಬಳಿಕ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣದ ನಾಲ್ಕು ತಿಂಗಳ ಬಳಿಕ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ ಮಾಡಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿರುವ ಆರೋಪಿಗಳಿಗೆ ಇಂತಹ ಸ್ವಾಗತ ಅಗತ್ಯವಿತ್ತೇ? ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ.
ಜೈಲಿನ ಎದುರೇ ಪ್ರಮುಖ ಆರೋಪಿ ಬಸಪ್ಪ ನಾಯ್ಕ್ ಗೆ ಹೂ ಮಾಲೆ ಹಾಕಿ, ಸಿಹಿ ತಿನ್ನಿಸಿ ಸ್ವಾಗತಿಸಲಾಗಿದೆ. ಆರೋಪಿಗಳನ್ನು ವಂಟಮೂರಿಯಲ್ಲಿ ಮೆರವಣಿಗೆ ನಡೆಸಲು ಬೆಂಬಲಿಗರು ಮುಂದಾಗಿದ್ದರು. ಆದರೆ ಪೊಲೀಸರ ಅನುಮತಿ ಸಿಗದ ಕಾರಣ, ಮೆರವಣಿಗೆ ಕೈಬಿಟ್ಟು, ಪಟಾಕಿ ಸಿಡಿಸಿ ಸಂಭ್ರಮಿಸಲಾಗಿದೆ.

RELATED ARTICLES
- Advertisment -
Google search engine

Most Popular