Tuesday, May 20, 2025
Homeಅಪರಾಧಅಂಬೇಡ್ಕರ್ ಜಯಂತ್ಯೋತ್ಸವ ಮೆರವಣಿಗೆಯಲ್ಲಿ ಯುವಕನಿಗೆ ಇರಿದು ಹತ್ಯೆ

ಅಂಬೇಡ್ಕರ್ ಜಯಂತ್ಯೋತ್ಸವ ಮೆರವಣಿಗೆಯಲ್ಲಿ ಯುವಕನಿಗೆ ಇರಿದು ಹತ್ಯೆ

ಕಲಬುರಗಿ: ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯ ಸಲುವಾಗಿ ಅದ್ದೂರಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ನಗರದ ಜೇವರ್ಗಿ ಕ್ರಾಸ್ ಬಳಿ ಭಾನುವಾರ ರಾತ್ರಿ ಹತ್ತು ಗಂಟೆಗೆ ಘಟನೆ ನಡೆದಿದೆ. ಅಂಬೇಡ್ಕರ್ ಜಯಂತ್ಯೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಅದ್ದೂರಿಯಾಗಿ ಮೆರವಣಿಗೆ ನಡೆಯುತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ 26 ವರ್ಷದ ಆಕಾಶ್ ಎಂಬಾತನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಗೆ ಸಂಬಂಧಿಸಿ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular